ರಾಜ್ಯದ ಎಲ್ಲಾ ತಾಲೂಕುಗಳಲ್ಲೂ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ

ಬೆಂಗಳೂರು: ರಾಜ್ಯದ ಪ್ರತಿ ತಾಲೂಕುಗಳಲ್ಲಿಯೂ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಯುವ ಜನ ಸೇವೆ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿಯ ಸಿಮೆಂಟ್ ಮಂಜು ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿ, ರಾಜ್ಯದ ಎಲ್ಲಾ ತಾಲೂಕುಗಳಲ್ಲಿಯೂ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲಾ ತಾಲೂಕುಗಳಲ್ಲಿ ಕ್ರೀಡಾಂಗಣ ನಿರ್ಮಿಸುವ ಜೊತೆಗೆ ಇರುವ ಕ್ರೀಡಾಂಗಣಗಳ ಸ್ಥಿತಿಗತಿಯ ಬಗ್ಗೆ ವರದಿ ಪಡೆದು, ದುರಸ್ತಿ ಮತ್ತು ಇನ್ನಿತರ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read