B.Y ವಿಜಯೇಂದ್ರ ಒಳ್ಳೆ ಸಂಘಟನೆಗಾರ ಎಂದು ಹೇಳಲು ಬರುವುದಿಲ್ಲ : ಗೃಹ ಸಚಿವ ಜಿ. ಪರಮೇಶ್ವರ್

ಬೆಂಗಳೂರು : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಇಂದು ರಾಜ್ಯಾಧ್ಯಕ್ಷರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಜಿ. ಪರಮೇಶ್ವರ್ ವಿಜಯೇಂದ್ರ ಒಳ್ಳೆ ಸಂಘಟನೆಗಾರ ಎಂದು ಹೇಳಲು ಬರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದು ಅವರ ಪಕ್ಷದ ಆಂತರಿಕ ವಿಚಾರ. ಆದರೆ ರಾಜ್ಯದ ದೃಷ್ಟಿಯಿಂದ ವಿರೋಧ ಪಕ್ಷ ಬಲಿಷ್ಠವಾಗಿರಬೇಕು. ಸರ್ಕಾರವನ್ನು ಪಾಸಿಟಿವ್ ಆಗಿ ಎಚ್ಚರಿಸಬೇಕೆಂಬುದು ನಮ್ಮ ಅಪೇಕ್ಷೆ. ಯಾವುದೇ ಸರ್ಕಾರ ಇದ್ದರೂ ಅದನ್ನು ನಿರೀಕ್ಷೆ ಮಾಡುತ್ತೇವೆ. ವಿಜಯೇಂದ್ರ ಒಳ್ಳೇ ಸಂಘಟನೆಗಾರ ಎಂದು ಹೇಳಲು ಬರುವುದಿಲ್ಲ ಎಂದು ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read