BIG NEWS : B.Y ವಿಜಯೇಂದ್ರ ತಾತ್ಕಾಲಿಕ ಬಿಜೆಪಿ ಅಧ್ಯಕ್ಷ, ಜೂನ್ ನಂತರ ಅಧಿಕಾರ ಉಳಿಯಲ್ಲ-ಎಂ ಲಕ್ಷ್ಮಣ್ ಭವಿಷ್ಯ

ಬೆಂಗಳೂರು : ಬಿ.ವೈ ವಿಜಯೇಂದ್ರ ತಾತ್ಕಾಲಿಕ ಬಿಜೆಪಿ ಅಧ್ಯಕ್ಷ , ಜೂನ್ ನಂತರ ಅವರ ಅಧಿಕಾರ ಉಳಿಯಲ್ಲ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಜೂನ್ ನಂತರ ಬಿವೈ ವಿಜಯೇಂದ್ರ ಅಧ್ಯಕ್ಷರಾಗಿ ಉಳಿಯಲ್ಲ. ಜೂನ್ ನಂತರ ಬಿಜೆಪಿ ಅಧ್ಯಕ್ಷರಾಗಲು ಬಿಡಲ್ಲ. ಬಿವೈ ವಿಜಯೇಂದ್ರ ತಾತ್ಕಾಲಿಕ ಅಧ್ಯಕ್ಷ ಅಷ್ಟೇ ಎಂದರು.

ಲಿಂಗಾಯತರು ಬಿಜೆಪಿ ಬಿಟ್ಟಿದ್ದಾರೆ ಅಂತ ಅಮಿತ್ ಶಾ ಮೋದಿ ಮಾಡಿರುವ ನಾಟಕ. ನಾಟಕದ ಸ್ಕ್ರೀಪ್ಟ್ ರಚನೆ ಮಾಡಿ ಅಧ್ಯಕ್ಷ ಸ್ಥಾನಕೊಟ್ಟಿದ್ದಾರೆ. ಲಿಂಗಾಯತ ಸಮುದಾಯವನ್ನು ಸಮಾಧಾನ ಮಾಡಲು ಆಡಿರುವ ನಾಟಕ. ನಾಟಕವನ್ನ ನಂಬಿ ಲಿಂಗಾಯತರು ಯಾಮಾರಬೇಡಿ ಎಂದು ಕೆ.ಪಿ.ಸಿ.ಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿದ್ದಾರೆ.
ಇನ್ನೂ, ನವೆಂಬರ್ 15ರಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸುತ್ತೇನೆ ಎಂದು ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.ಮಲ್ಲೇಶ್ವರಂ ರಾಜ್ಯ ಬಿಜೆಪಿ ಕಚೇರಿಯಲ್ಲಿ ನವೆಂಬರ್ 15 ರಂದು ಬೆಳಿಗ್ಗೆ 10 ಗಂಟೆಗೆ ಪಕ್ಷದ ಅಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸಲಿದ್ದು, ನವೆಂಬರ್ 16ರಂದು ಕಾರ್ಯಕರ್ತರ ಸಭೆ ನಡೆಸುವ ನಿರ್ಣಯ ಮಾಡಿದ್ದೇವೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಭೆ ನಡೆಸಲು ನಿರ್ಧರಿಸಿದ್ದೇವೆ. ಪಕ್ಷದ ಎಲ್ಲಾ ಹಿರಿಯರ ಸಮ್ಮುಖದಲ್ಲಿ ಜವಾಬ್ದಾರಿ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read