ಮೆಂಥೋಪ್ಲಸ್ ಡಬ್ಬಿ ಗಂಟಲಲ್ಲಿ ಸಿಲುಕಿ ಮಗು ಸಾವು

ಬಳ್ಳಾರಿ: ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದ ಐದನೇ ವಾರ್ಡ್ ಇಂದಿರಾ ನಗರದಲ್ಲಿ ನಡೆದಿದೆ.

ಮುತ್ಯಾಲ ರಾಘವೇಂದ್ರ ಮತ್ತು ತುಳಸಿ ದಂಪತಿಯ ಏಕೈಕ ಪುತ್ರಿ ಪ್ರಿಯದರ್ಶಿನಿ ಮೃತಪಟ್ಟ ಮಗು ಎಂದು ಹೇಳಲಾಗಿದೆ. ಮನೆಯಲ್ಲಿ ಆಟವಾಡಿಕೊಂಡಿದ್ದ ಮಗು ಕೈಗೆ ಸಿಕ್ಕ ಮೆಂಥೋಪ್ಲಸ್ ಡಬ್ಬಿಯನ್ನು ನುಂಗಿದ್ದು, ಅದು ಗಂಟಲಲ್ಲಿ ಸಿಲುಕಿ ಉಸಿರಾಟದ ತೊಂದರೆಯಾಗಿ ಜೋರಾಗಿ ಆಳಲು ಶುರು ಮಾಡಿದೆ.

ಈ ವೇಳೆ ತಾಯಿ ಮಗುವಿನ ಗಂಟಲಿಗೆ ಕೈ ಹಾಕಿ ಡಬ್ಬಿ ತೆಗೆಯಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಕೂಡಲೇ ಸಮೀಪದ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೊರಟಿದ್ದು ಮಾರ್ಗಮಧ್ಯೆಯೇ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ.

ದಂಪತಿಗೆ ಮದುವೆಯಾಗಿ 10 ವರ್ಷದ ನಂತರ ಮಗುವಾಗಿದ್ದು, ಕಂದನನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read