ಬಾದಾಮಿಯಿಂದಲೇ ಸಿದ್ಧರಾಮಯ್ಯ ಸ್ಪರ್ಧೆ…? ಸ್ವಕ್ಷೇತ್ರದಲ್ಲಿ ಇಂದು ರೋಡ್ ಶೋ, 500 ಕೋಟಿ ರೂ. ಕಾಮಗಾರಿಗಳಿಗೆ ಚಾಲನೆ

ಬೆಂಗಳೂರು: ಬಾಗಲಕೋಟೆ ಜಿಲ್ಲೆ ಬಾದಾಮಿಗೆ ಇಂದು ಮಧ್ಯಾಹ್ನ 2 15ಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 11:30 ಕ್ಕೆ ಬೆಂಗಳೂರಿನಿಂದ ಹೊರಡುವ ಅವರು ಮಧ್ಯಾಹ್ನ 2.15ಕ್ಕೆ ಚಿಕ್ಕಮುಚ್ಚಳಗುಡ್ಡ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಬಾದಾಮಿ ಕ್ಷೇತ್ರ ವ್ಯಾಪ್ತಿಯ ಚಿಕ್ಕಮುಚ್ಚಳಗುಡ್ಡಕ್ಕೆ ಆಗಮಿಸಲರುವ ಅವರು ತೋಗುಣಶಿಗೆ ತೆರಳುವರು. ಬಾದಾಮಿ -ಕೆರೂರು ಶಾಶ್ವತ ಕುಡಿಯುವ ನೀರು ಯೋಜನೆಗೆ ಚಾಲನೆ ನೀಡಲಿದ್ದಾರೆ. ತೋಗುಣಶಿಯಲ್ಲಿ ಯೋಜನೆಗೆ ಚಾಲನೆ ನೀಡಲಿದ್ದು, ನಂತರ ಬಾದಾಮಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ಬಾದಾಮಿಯ ರಾಮದುರ್ಗ ವೃತ್ತದಿಂದ ಎಪಿಎಂಸಿ ವರೆಗೆ ರೋಡ್ ಶೋ ನಡೆಯಲಿದೆ.

ನಂತರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 500 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು. ಬಾದಾಮಿಯ ಎಪಿಎಂಸಿ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಬಾದಾಮಿ ದೂರವಾಗುತ್ತದೆ. ಈ ಬಾರಿ ಬಾದಾಮಿಯಿಂದ ಸ್ಪರ್ಧಿಸಲ್ಲ ಎಂದಿದ್ದ ಸಿದ್ಧರಾಮಯ್ಯ ಬಾದಾಮಿಯಿಂದಲೇ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read