BREAKING NEWS: 4 ವರ್ಷದ ಬಾಲಕನ ಮೇಲೆ ಹರಿದ ಶಾಲಾ ಬಸ್; ಸ್ಥಳದಲ್ಲೇ ಸಾವು

ಬಾಗಲಕೋಟೆ: ನಾಲ್ಕು ವರ್ಷದ ಬಾಲಕನ ಮೇಲೆ ಖಾಸಗಿ ಶಾಲೆಯ ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬರಗಿ ಕ್ರಾಸ್ ಬಳಿ ನಡೆದಿದೆ.

ಸಂಗಣ್ಣ ಹೊಸೂರು ಎಂಬುವವರ ಪುತ್ರ ನಾಲ್ಕು ವರ್ಷದ ಅಭಿನಂದನ್ ಮೃತ ಬಾಲಕ. ವೇಗವಾಗಿ ಬಂದ ಶಾಲಾ ಬಸ್ ಬಾಲಕನ ಮೇಲೆಯೇ ಹರಿದು ಹೋಗಿದೆ. ಬಾಲಕನ ಕೈ ತುಂಡಾಗಿದ್ದು, ದೇಹ ಛಿದ್ರ ಛಿದ್ರಗೊಂಡಿದೆ.

ಅಪಘಾತದ ಭೀಕರತೆಗೆ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read