ಇದೇ ಮೊದಲ ಬಾರಿಗೆ ವೈದ್ಯಕೀಯ ವರದಿಯೊಂದಿಗೆ ವಕೀಲರ ವಾದ: ನಟ ದರ್ಶನ್ ಜಾಮೀನು ಭವಿಷ್ಯ ಇಂದು ನಿರ್ಧಾರ: ಬೆಂಗಳೂರಿಗೆ ಸ್ಥಳಾಂತರ ಸಾದ್ಯತೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿಯ ಸೆಂಟ್ರಲ್ ಜೈಲ್ ನಲ್ಲಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 28ರಂದು ನಡೆಯಲಿದೆ. ದರ್ಶನ್ ಪರ ವಕೀಲರೊಂದಿಗೆ ಕುಟುಂಬ ಸದಸ್ಯರು ಈಗಾಗಲೇ ಚರ್ಚೆ ನಡೆಸಿದ್ದು, ಬೆನ್ನು ನೋವಿನ ಕಾರಣಕ್ಕೆ ಜಾಮೀನು ನೀಡುವಂತೆ ಮನವಿ ಮಾಡಲಾಗುವುದು.

ಹೈಕೋರ್ಟ್ ನಲ್ಲಿ ಇಂದು ಕೊಲೆ ಆರೋಪಿ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ದರ್ಶನ್ ಅವರಿಗೆ ಜಾಮೀನು ಸಿಗುತ್ತಾ? ಅಥವಾ ಬೆಂಗಳೂರಿಗೆ ಸ್ಥಳಾಂತರವಾಗುತ್ತಾರಾ ಎನ್ನುವುದು ಗೊತ್ತಾಗಲಿದೆ. ಇದೇ ಮೊದಲ ಬಾರಿಗೆ ವೈದ್ಯಕೀಯ ವರದಿಯೊಂದಿಗೆ ಹೈಕೋರ್ಟ್ ನಲ್ಲಿ ಇಂದು ದರ್ಶನ್ ಪರ ವಕೀಲರು ವಾದ ಮಂಡಿಸುವರು.

ದರ್ಶನ್ ಗೆ ಜಾಮೀನು ನೀಡುವಂತೆ ವಕೀಲರು ಮನವಿ ಮಾಡಲಿದ್ದು, ಜಾಮೀನು ಸಿಗದಿದ್ದರೆ ವೈದ್ಯಕೀಯ ವರದಿ ಆಧರಿಸಿ ಬೆಂಗಳೂರಿಗೆ ಶಿಫ್ಟ್ ಮಾಡಲು ಕೋರಲಾಗುವುದು ಎನ್ನಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read