ಈಶ್ವರಪ್ಪ ಹೇಳಿಕೆಗೆ ಬೈರತಿ ಬಸವರಾಜ್ ಕೆಂಡಾಮಂಡಲ

ಬಾಗಲಕೋಟೆ: ಕಾಂಗ್ರೆಸ್ ನವರನ್ನು ಸೇರಿಸಿಕೊಂಡು ಹೀಗೆಲ್ಲಾ ಆಯ್ತು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ನೀಡಿದ ಹೇಳಿಕೆಗೆ ಮಾಜಿ ಸಚಿವ ಬೈರತಿ ಬಸವರಾಜ್ ಕೆಂಡಾಮಂಡಲರಾಗಿದ್ದಾರೆ.

ಯಾವುದೇ ಕಾರಣಕ್ಕೂ ಈ ರೀತಿ ಹೇಳಿಕೆಯನ್ನು ಸಹಿಸುವುದಿಲ್ಲ ಎಂದು ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಬೈರತಿ ಬಸವರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

ಈಶ್ವರಪ್ಪ ಹೇಳಿಕೆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ. ಅವರು ಯಾವ ಅರ್ಥದಲ್ಲಿ ಹೀಗೆ ಹೇಳಿದ್ದಾರೋ ಗೊತ್ತಿಲ್ಲ. ಕಾಂಗ್ರೆಸ್ ನವರನ್ನು ಸೇರಿಸಿಕೊಂಡು ಹೀಗೆಲ್ಲಾ ಆಯಿತು ಎಂಬ ಈಶ್ವರಪ್ಪ ಹೇಳಿಕೆ ಬಗ್ಗೆ ನಾವೆಲ್ಲ ಚರ್ಚೆ ಮಾಡಿ ಪ್ರತಿಕ್ರಿಯೆ ನೀಡುತ್ತೇವೆ ಎಂದರು.

ಬಿಜೆಪಿ ಕಾಲದ ಹಗರಣಗಳ ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವ ಆ್ಯಂಗಲ್ ನಲ್ಲಿ ಬೇಕಾದರೂ ತನಿಖೆ ಮಾಡಿಕೊಳ್ಳಲಿ. ರಾಜ್ಯ ಸರ್ಕಾರದ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಬಾಗಲಕೋಟೆಯಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read