BREAKING: ಬಾಳೆಬರೆ ಘಾಟ್ ನಲ್ಲಿ ಮಣ್ಣು ಕುಸಿತ: ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ

ಶಿವಮೊಗ್ಗ: ಧಾರಾಕಾರ ಮಳೆಯಿಂದಾಗಿ ಬಾಳೆಬರೆ ಘಾಟ್ ನಲ್ಲಿ ಮಣ್ಣು ಕುಸಿದು ಅವಾಂತರ ಸೃಷ್ಟಿಯಾಗಿದ್ದು, ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೆಬರೆ ಘಾಟ್ ನಲ್ಲಿ ಮಣ್ಣು ಕುಸಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಭಾರಿ ವಾಹನಗಳ ಸಂಚಾರವನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

ಭಾರಿ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read