BREAKING: ಬಿಗಿ ಭದ್ರತೆಯಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ಪ್ರಕರಣದ ತನಿಖೆ ಹಿನ್ನೆಲೆಯಲ್ಲಿ ನಟ ದರ್ಶನ್ ಹಾಗೂ ಅವರ 9 ಮಂದಿ ಆಪ್ತರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ.

ದರ್ಶನ್ ಅವರನ್ನು ಬುಧವಾರ ರಾತ್ರಿ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ. ಬಿಗಿ ಭದ್ರತೆಯಲ್ಲಿ ಬೋಲೇರೋ ವಾಹನದಲ್ಲಿ ದರ್ಶನ್ ಅವರನ್ನು ಬಳ್ಳಾರಿ ಜಿಲ್ಲೆಗೆ ಕರೆದೊಯ್ಯಲಾಗಿದೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಅವರನ್ನು ನ್ಯಾಯಾಲಯದ ಆದೇಶದಂತೆ ಪೊಲೀಸ್ ಭದ್ರತೆಯಲ್ಲಿ ಸ್ಥಳಾಂತರಿಸಲಾಗಿದೆ. ನೈಸ್ ರಸ್ತೆಯ ಮೂಲಕ ನೆಲಮಂಗಲ, ತುಮಕೂರು, ಶಿರಾ, ಹಿರಿಯೂರು, ಚಳ್ಳಕೆರೆ ಮಾರ್ಗವಾಗಿ ಬಳ್ಳಾರಿ ಜೈಲಿಗೆ ಕರೆದೊಯ್ಯಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read