ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಜಿಟಿಜಿಟಿ ಮಳೆ, ಮತ್ತೊಂದೆಡೆ ಭಾರಿ ಬಿರುಗಾಳಿ ಬೀಸುತ್ತಿದ್ದು, ಅವಾಂತರಗಳು ಸಂಭವಿಸುತ್ತಿವೆ. ಬಿರುಗಾಳಿ ಹೊಡೆತಕ್ಕೆ ಮರದ ಕೊಂಬೆಯೊಂದು ಬೈಕ್ ಸವಾರನ ಮೇಲೆ ಬಿದ್ದಿರುವ ಘಟನೆ ನಡೆದಿದೆ.
ಬನಶಂಕರಿ 2ನೇ ಹಂತದ ಶ್ರೀನಿವಾಸನಗರದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಏಕಾಏಕಿ ಮರದ ಕೊಂಬೆ ಮುರಿದು ಬಿದ್ದಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಕ್ಷಯ್ (29) ಗಾಯಗೊಂಡಿರುವ ಯುವಕ
ಮರದ ಕೊಂಬೆ ಬಿದ್ದ ಹೊಡೆತಕ್ಕೆ ಬೈಕ್ ಸವಾರ ಬೈಕ್ ನಿಂದ ಕೆಳಗೆ ಬಿದ್ದಿದ್ದಾರೆ. ರಕ್ತದ ಮಡುವಲ್ಲಿ ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಬೈಕ್ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.