BREAKING: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆ ಅರೆಸ್ಟ್

ಮಂಗಳೂರು: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಲಾಗಿದೆ. ಮಂಗಳೂರು ಹೊರವಲಯದ ಮುಕ್ಕ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ್ದು, ಬಾಂಗ್ಲಾದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್(25) ಎಂಬುವನನ್ನು ಬಂಧಿಸಲಾಗಿದೆ.

ರಾಜ್ಯ ಆಂತರಿಕ ಭದ್ರತಾ ವಿಭಾಗ, ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಅನರುಲ್ ಶೇಖ್ ನನ್ನು ಬಂಧಿಸಿದ್ದಾರೆ. ಮುಕ್ಕ ಗ್ರಾಮದ ರೋಹನ್ ಎಸ್ಟೇಟ್ ನಲ್ಲಿ ಅನರುಲ್ ಶೇಖ್ ನೆಲೆಸಿದ್ದು, ಕಳೆದ ಮೂರು ವರ್ಷದಿಂದ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ.

ಮೂರು ವರ್ಷದ ಹಿಂದೆ ಅಕ್ರಮವಾಗಿ ಭಾರತದ ಗಡಿ ಪ್ರವೇಶಿಸಿದ್ದ. ಭಾರತ -ಬಾಂಗ್ಲಾ ಅಂತರಾಷ್ಟ್ರೀಯ ಗಡಿ ರೇಖೆ ಲಾಲಗೋಲ ಮೂಲಕ ಪ್ರವೇಶಿಸಿ ಪಶ್ಚಿಮ ಬಂಗಾಳದ ಮೂಲಕ ಭಾರತಕ್ಕೆ ಬಂದು ಅಲ್ಲಿಂದ ಕರ್ನಾಟಕದ ಉಡುಪಿಗೆ ಬಂದು ನೆಲೆಸಿದ್ದ. ನಂತರ ಮಂಗಳೂರಿನ ಮುಕ್ಕ ಗ್ರಾಮದ ರೋಹನ್ ಎಸ್ಟೇಟ್ ನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read