ಬ್ಯಾಂಕ್ ಮ್ಯಾನೇಜರ್ ನಾಪತ್ತೆ: ನದಿಯಲ್ಲಿ ಶೋಧ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಅರಳಸುರುಳಿ ಯೂನಿಯನ್ ಬ್ಯಾಂಕ್ ಶಾಖೆ ವ್ಯವಸ್ಥಾಪಕ ಎನ್. ಶ್ರೀವಾಸ್ತವ್(38) ನಾಪತ್ತೆಯಾಗಿದ್ದಾರೆ.

ಸೋಮವಾರದಿಂದ ಅವರು ನಾಪತ್ತೆಯಾಗಿದ್ದು, ಪೊಲೀಸರು ಮಂಗಳವಾರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಸೋಮವಾರ ಶ್ರೀವಾಸ್ತವ್ ಅವರು ತೀರ್ಥಹಳ್ಳಿಯ ತುಂಗಾನದಿ ತೀರದ ರಾಮಕುಂಡದ ಬಳಿ ಈಜಾಡಲು ತೆರಳಿದ್ದನ್ನು ಸ್ಥಳೀಯರು ನೋಡಿದ್ದಾರೆ.

ಮೊಬೈಲ್ ನೆಟ್ವರ್ಕ್ ಸುಳಿವು ನದಿ ತೀರದಲ್ಲಿ ದೊರೆಯುತ್ತಿರುವ ಹಿನ್ನೆಲೆಯಲ್ಲಿ ನದಿಯಲ್ಲಿ ಶೋಧ ಕಾರ್ಯ ಕೈಗೊಳ್ಳಲಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣದವರಾದ ಶ್ರೀವಾಸ್ತವ ಎರಡು ತಿಂಗಳ ಹಿಂದೆ ಅರಳಸುರಳಿ ಯೂನಿಯನ್ ಬ್ಯಾಂಕ್ ಶಾಖೆ ವ್ಯವಸ್ಥಾಪಕರಾಗಿ ವರ್ಗಾವಣೆಗೊಂಡಿದ್ದರು. ಅವರಿಗಾಗಿ ಹುಡುಕಾಟ ನಡೆಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read