ಕಾಂಗ್ರೆಸ್ ಬಣ್ಣ ಬದಲಾಯಿಸಿದೆ, ಜನರ ನಿರೀಕ್ಷೆ ಹುಸಿಯಾಗಿದೆ: ಮಾಜಿ ಸಿಎಂ ಬೊಮ್ಮಾಯಿ ಆರೋಪ

ಬೆಂಗಳೂರು: ಕಾಂಗ್ರೆಸ್ ತನ್ನ ಬಣ್ಣ ಬದಲಾಯಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಡೆದಿದೆ. ಗ್ಯಾರಂಟಿ ಯೋಜನೆಗಳ ಘೋಷಣೆ ಬಗ್ಗೆ ಜನ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಐದು ಗ್ಯಾರಂಟಿಗಳ ಬಗ್ಗೆ ಮುಖ್ಯಮಂತ್ರಿ ಸರಿಯಾಗಿ ಸ್ಪಷ್ಟನೆ ನೀಡಿಲ್ಲ. ಯಾವಾಗ ಐದು ಗ್ಯಾರಂಟಿ ಜಾರಿ ಎಂಬುದರ ಬಗ್ಗೆ ವಿವರಣೆ ನೀಡಿಲ್ಲ. ಸಂಪುಟ ಸಭೆಯಲ್ಲಿ ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರ 3 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ಸಿಎಂ ಆರೋಪಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಇದಕ್ಕೆ ಅಧಿವೇಶನದಲ್ಲೇ ನಾವು ಉತ್ತರ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.

ಕೋವಿಡ್ ನಿಂದಾಗಿ ರಾಜ್ಯದಲ್ಲಿ ಈ ವರ್ಷ ಸಾಲ ಹೆಚ್ಚಾಗಿದೆ. ರಾಜ್ಯದ ಹಲವಾರು ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಲಿವೆ. ಕಾಂಗ್ರೆಸ್ ಗ್ಯಾರಂಟಿ, ಘೋಷಣೆಯಾಗಿಯೇ ಉಳಿಯಲಿದೆ. ಇನ್ನೊಂದು ಸಂಪುಟ ಸಭೆಯವರೆಗೂ ಕಾದು ನೋಡೋಣ ಎಂದು ಬೊಮ್ಮಾಯಿ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read