Video: ವಿದ್ಯುತ್ ಸ್ಪರ್ಶದಿಂದ ವ್ಯಕ್ತಿ ಸಾವು; ಪವಾಡಸದೃಶ್ಯ ರೀತಿಯಲ್ಲಿ ಮಗು ಪಾರು

ತೆಲಂಗಾಣದ ವಾರಂಗಲ್‌ನಲ್ಲಿ ಬತುಕಮ್ಮ ಹಬ್ಬದ ಆಚರಣೆಯ ವೇಳೆ ಹಬ್ಬದ ಅಲಂಕಾರದ ಅಂಗವಾಗಿ ಅಳವಡಿಸಲಾಗಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿ ಕದಂ ಯಾಕಯ್ಯ (45) ಎಂಬ ವ್ಯಕ್ತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ವೇಳೆ ಕದಂ ಯಾಕಯ್ಯ ಮಗುವನ್ನು ಹಿಡಿದುಕೊಂಡಿದ್ದು, ಪವಾಡಸದೃಶವಾಗಿ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಕಾರಿನ ಡ್ಯಾಶ್ ಕ್ಯಾಮ್‌ನಲ್ಲಿ ಸೆರೆಯಾದ ಈ ಅಪಘಾತದ ದೃಶ್ಯವು ಕದಂ, ಉತ್ಸವದ ದೀಪಗಳ ಅಡಿಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ತೋರಿಸುತ್ತದೆ.

ಈ ವೇಳೆ ಕೆಳಗೆ ಬಿದ್ದಿದ್ದ ವಿದ್ಯುತ್‌ ತಂತಿಯೊಂದಿಗೆ ಆಕಸ್ಮಿಕವಾಗಿ ಸಂಪರ್ಕಕ್ಕೆ ಬಂದಿದ್ದು, ಇದು ಅವರ ಸಾವಿಗೆ ಕಾರಣವಾಯಿತು. ಇವರ ಜೊತೆಗಿದ್ದ ಇಬ್ಬರು ವ್ಯಕ್ತಿಗಳು ಮಗುವನ್ನು ರಕ್ಷಿಸಲು ಯಶಸ್ವಿಯಾದರೂ ಕದಂ ಸ್ಥಳದಲ್ಲೇ ಸಾವನ್ನಪ್ಪಿದರು.

Tragic Incident in Warangal (Disturbing Video)

https://twitter.com/TeluguScribe/status/1844609618552500311?ref_src=twsrc%5Etfw%7Ctwcamp%5Etweetembed%7Ctwterm%5E1844609618552500311%7Ctwgr%5E726a1e460b183df417cd0902225d67cdc80f135e%7Ctwcon%5Es1_&ref_url=https%3A%2F%2Fwww.latestly.com%2Fsocially%2Findia%2Fnews%2Fbathukamma-celebration-turns-tragic-in-telanganas-warangal-as-man-holding-child-dies-of-electrocution-video-surfaces-6335819.html

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read