BREAKING: BBMP ಕಚೇರಿ ಅಗ್ನಿ ಅವಘಡ: ಮೂವರು ನೌಕರರ ಸ್ಥಿತಿ ಗಂಭೀರ

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಲ್ಯಾಬ್ ನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಗಾಯಗೊಂಡಿರುವ 9 ಜನರ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ನಿರ್ದೇಶಕ ಡಾ. ರಮೇಶ್ ಕೃಷ್ಣ ಹೇಳಿದ್ದಾರೆ.

ಡಯಾಲಿಸಿಸ್ ಪೇಷಂಟ್ ಕಿರಣ್ ಸ್ಥಿತಿ ಗಂಭೀರವಾಗಿದೆ. ನಿನ್ನೆ ಡಯಾಲಿಸಿಸ್ ಮಾಡಲಾಗಿತ್ತು. ಮತ್ತೆ ಮಾಡುವಂತೆ ಸೂಚನೆ ನೀಡಲಾಗಿದೆ. ಜ್ಯೋತಿ ಮುಖಕ್ಕೆ ಹೆಚ್ಚು ಹಾನಿಯಾಗಿದೆ. ಆದರೆ, ಸ್ಟೇಬಲ್ ಆಗಿದ್ದಾರೆ. 9 ಗಾಯಾಳುಗಳ ಪೈಕಿ ಶಿವಕುಮಾರ್ ಮತ್ತು ಜ್ಯೋತಿ ಸ್ಥಿತಿ ಗಂಭೀರವಾಗಿದೆ. ಅವರ ಆರೋಗ್ಯದ ಮೇಲೆ ಇನ್ನೂ ನಾಲ್ಕು ದಿನ ನಿಗಾವಹಿಸುವ ಅಗತ್ಯವಿದೆ. ಉಳಿದ ಆರು ಗಾಯಾಳುಗಳ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ರಮೇಶ್ ಕೃಷ್ಣ ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read