BIG NEWS: ಕಾಂಗ್ರೆಸ್ ಸೇರ್ತಾರಾ ಬಿ.ಸಿ. ಪಾಟೀಲ್, ರಾಜೂಗೌಡ…? ಸುದೀಪ್ ಬರ್ತಡೇ ಪಾರ್ಟಿಯಲ್ಲಿ ಡಿಕೆಶಿ ಜತೆ ಚರ್ಚೆ

ಬೆಂಗಳೂರು: ನಟ ಕಿಚ್ಚ ಸುದೀಪ್ ಬರ್ತಡೇ ಪಾರ್ಟಿಯಲ್ಲಿ ರಾಜಕೀಯ ನಾಯಕರು ಭಾಗಿಯಾಗಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬರ್ತಡೇ ಪಾರ್ಟಿಯಲ್ಲಿ ನಾಯಕರು ಭಾಗಿಯಾಗಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಬಿ.ಸಿ. ಪಾಟೀಲ್, ರಾಜೂಗೌಡ ಅವರೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಮಾಲೋಚನೆ ನಡೆಸಿದ್ದಾರೆ. ಮೂವರು ನಾಯಕರ ಚರ್ಚೆ ತೀವ್ರ ಕುತೂಹಲ ಮೂಡಿಸಿದೆ.

ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬೇರೆ ಪಕ್ಷಗಳ ನಾಯಕರನ್ನು ಕಾಂಗ್ರೆಸ್ ನತ್ತ ಸೆಳೆಯುತ್ತಿದ್ದು, ಇದೇ ಸಂದರ್ಭದಲ್ಲಿ ಮಾಜಿ ಸಚಿವರಾದ ಬಿ.ಸಿ. ಪಾಟೀಲ್ ಮತ್ತು ರಾಜೂಗೌಡ ಅವರೊಂದಿಗೆ ಡಿ.ಕೆ. ಶಿವಕುಮಾರ್ ಚರ್ಚೆ ನಡೆಸಿದ್ದಾರೆ. ಆದರೆ, ಅವರ ನಡುವೆ ರಾಜಕೀಯ ಹೊರತಾದ ಚರ್ಚೆಯೂ ನಡೆದಿರಬಹುದೆಂದು ಹೇಳಲಾಗಿದೆ. ಒಟ್ಟಿನಲ್ಲಿ ಮೂವರು ನಾಯಕರು ಸುದೀಪ್ ಬರ್ತಡೇ ಪಾರ್ಟಿಯಲ್ಲಿ ಒಂದು ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿರುವುದು ಭಾರೀ ಕುತೂಹಲ ಮೂಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read