ಹಾಸ್ಟೆಲ್ ಗಳಿಗೆ ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆದ ಬಿಸಿಎಂ ಅಧಿಕಾರಿ ಅಮಾನತು

ತುಮಕೂರು: ತುಮಕೂರು ತಾಲೂಕಿನ ಹಿಂದುಳಿದ ವರ್ಗಗಳ ಹಾಸ್ಟೆಲ್ ಗಳಿಗೆ ಸಿದ್ಧಗಂಗಾ ಮಠದಿಂದ ಅಕ್ಕಿ ಸಾಲ ಪಡೆದ ಪ್ರಕರಣದಲ್ಲಿ ತುಮಕೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ(ಬಿಸಿಎಂ) ಅಧಿಕಾರಿ ಗೀತಮ್ಮ ಅವರನ್ನು ಅಮಾನತು ಮಾಡಲಾಗಿದೆ.

ಹಂಚಿಕೆಯಾಗಿದ್ದ ಅಕ್ಕಿ ಮತ್ತು ಗೋಧಿಯನ್ನು ಎತ್ತುವಳಿ ಮಾಡಿ ಹಾಸ್ಟೆಲ್ ಗಳಿಗೆ ಸರಬರಾಜು ಮಾಡುವಲ್ಲಿ ಅಧಿಕಾರಿ ಗೀತಮ್ಮ ಅವರು ಕರ್ತವ್ಯ ಲೋಪ ಎಸಗಿದ್ದಾರೆ. ಸಿದ್ದಗಂಗಾ ಮಠದಿಂದ ನಿಯಮಬಾಹಿರವಾಗಿ ಅಕ್ಕಿ ಸಾಲ ಪಡೆದಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ಎ. ದಯಾನಂದ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read