ಗೃಹ ಸಾಲದ ಕಂತು ವಸೂಲಿಗೆ ಹೋದ ಸಿಬ್ಬಂದಿ ಮೇಲೆ ಮನೆ ಮಾಲೀಕನಿಂದ ಹಲ್ಲೆ

ರಾಮನಗರ: ಗೃಹ ಸಾಲದ ಕಂತು ವಸೂಲಿಗೆ ಹೋಗಿದ್ದ ಫೈನಾನ್ಸ್ ಸಿಬ್ಬಂದಿ ಮೇಲೆ ಮನೆ ಮಾಲೀಕ ಹಲ್ಲೆ ನಡೆಸಿದ ಘಟನೆ ರಾಮನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ನಡೆದಿದೆ.

ಖಾಸಗಿ ಫೈನಾನ್ಸ್ ಕಂಪನಿ ಸಿಬ್ಬಂದಿ ಮಿಥುನ್ ಕುಮಾರ್(23) ಹಲ್ಲೆಗೊಳಗಾದವರು. ದೊಡ್ಡಮಣ್ಣುಗುಡ್ಡೆ ಗ್ರಾಮದ ರಾಜೇಶ್ ಮನೆ ಕಟ್ಟಲು ಖಾಸಗಿ ಫೈನಾನ್ಸ್ ನಲ್ಲಿ ಸಾಲ ಪಡೆದುಕೊಂಡಿದ್ದು, ಆರು ತಿಂಗಳಿನಿಂದ ಕಂತಿನ ಹಣ ಪಾವತಿಸದೆ ಸತಾಯಿಸುತ್ತಿದ್ದರು. ಮಿಥುನ್ ಕುಮಾರ್ ಲೋನ್ ಕಟ್ಟುವಂತೆ ಕೇಳಲು ಹೋದ ಸಂದರ್ಭದಲ್ಲಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read