ಮರುಕಳಿಸಿದ ವಂಟಮೂರಿ ಮಾದರಿ ಘಟನೆ: ಪ್ರೀತಿಸಿ ಮದುವೆಯಾಗಿದ್ದ ಯುವಕನ ಪೋಷಕರ ಮೇಲೆ ಯುವತಿ ಮನೆಯವರ ಹಲ್ಲೆ

ಚಿಕ್ಕಬಳ್ಳಾಪುರ: ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಯುವತಿ ಮನೆಯವರು ಅಮಾನವೀಯವಾಗಿ ಹಲ್ಲೆ ಮಾಡಿದ ಘಟನೆ ಮಾಸುವ ಮೊದಲೇ ಅಂತಹುದೇ ಮತ್ತೊಂದು ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ದುಪ್ಪರ್ತಿ ಗ್ರಾಮದಲ್ಲಿ ಪ್ರೀತಿಸಿ ಮದುವೆಯಾಗಿದ್ದ ಯುವಕನ ಪೋಷಕರ ಮೇಲೆ ಯುವತಿ ಮನೆಯವರು ಹಲ್ಲೆ ಮಾಡಿದ್ದಾರೆ. ಗ್ರಾಮದ ಯುವಕ ಮತ್ತು ಯುವತಿ ಪರಸ್ಪರ ಪ್ರೀತಿಸಿ ಮನೆ ಬಿಟ್ಟು ಹೋಗಿ ಭಾನುವಾರ ಮದುವೆಯಾಗಿದ್ದಾರೆ. ಆಕ್ರೋಶಗೊಂಡ ಯುವತಿ ಕುಟುಂಬದವರು ಇಂದು ಯುವಕನ ತಂದೆ, ತಾಯಿ ಮೇಲೆ ದಾಳಿ ಮಾಡಿ ನಡುರಸ್ತೆಯಲ್ಲೇ ಮನಬಂದಂತೆ ಹಲ್ಲೆ ಮಾಡಿದ್ದಾರೆ.

ಯುವತಿಯ ಕುಟುಂಬದ ಸುಮಾರು 20 ಮಂದಿ ಯುವಕನ ಮನೆ ಮೇಲೆ ದಾಳಿ ಮಾಡಿದ್ದು, ಯುವಕನ ತಂದೆ, ತಾಯಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗ್ರಾಮದೊಳಗೆ ಆಂಬುಲೆನ್ಸ್ ಕೂಡ ಬರಲು ಬಿಡದೆ ಅಡ್ಡಿಪಡಿಸಿದ್ದಾರೆ. ನಂತರ ಗ್ರಾಮಕ್ಕೆ ಬಂದ ಪೊಲೀಸರು ಆಂಬುಲೆನ್ಸ್ ನಲ್ಲಿ ಗಾಯಾಳುಗಳನ್ನು ಗುಡಿಬಂಡೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read