ಆಸ್ತಿ ವಿಚಾರಕ್ಕೆ ಅಟ್ಟಾಡಿಸಿ ನಾಲ್ವರ ಮೇಲೆ ಹಲ್ಲೆ

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲೂಕಿನ ಮಾಳೆಗೆರೆ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಸಂಬಂಧಿಕರ ನಡುವೆ ಗಲಾಟೆ ನಡೆದಿದೆ.

ಮಚ್ಚು ಹಿಡಿದು ಅಟ್ಟಾಡಿಸಿ ಮಾರಣಾಂತಿಕವಾಗಿ ನಾಲ್ವರ ಮೇಲೆ ಹಲ್ಲೆ ನಡೆಸಲಾಗಿದೆ. ಮಲ್ಲೇಶಗೌಡ, ಶಶಿಕುಮಾರ್, ಗೌರೀಶ ಹಾಗೂ ತೀರ್ಥ ಎಂಬುವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಲ್ಲೇಶಗೌಡ ಅವರಿಗೆ ತಾಯಿಯಿಂದ ಬಂದಿದ್ದ 14 ಗುಂಟೆ ಪಿತ್ರಾರ್ಜಿತ ಆಸ್ತಿ ಇದ್ದು, 30 ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿದ್ದಾರೆ. ಮಳೆ ಬಂದ ಕಾರಣ ಅವರ ಮಕ್ಕಳಾದ ಶಶಿಕುಮಾರ್, ಗೌರೀಶ್ ಮತ್ತು ಸೊಸೆ ತೀರ್ಥ ಅವರೊಂದಿಗೆ ಮಲ್ಲೇಶಗೌಡ ಜಮೀನಿನಲ್ಲಿ ಉಳುಮೆ ಮಾಡುವಾಗ ಮಲ್ಲೇಶಗೌಡನ ಸಹೋದರನ ಮಕ್ಕಳಾದ ಮಧುಕುಮಾರ, ಚಂದ್ರೇಗೌಡ, ಕುಮಾರ, ಜವರೇಗೌಡ, ರುದ್ರೇಶ, ಲೋಕೇಶ ಅವರು ಇದು ತಮಗೆ ಸೇರಿದ ಜಾಗವೆಂದು ಬೈದಾಡಿ ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read