ಬೆಳಗಾವಿ: ಕೋರ್ಟ್ ಆವರಣದಲ್ಲಿಯೇ ವಕೀಲರೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ವಕೀಲ ಜಹೀರ್ ಹಲ್ಲೆಗೊಳಗಾದವರು. ಬೆಳಗವೈ ಕೋರ್ಟ್ ಆವರಣದಲ್ಲಿಯೇ ವಕೀಲ ಜಹೀರ್ ಅವರ ಮೇಲೆ ಕಲ್ಲು, ರಾಡ್ ಗಳಿಂದ ಹಲ್ಲೆ ನಡೆಸಲಾಗಿದೆ. ಜಹೀರ್ ಅವರ ತಲೆ, ಕಿವಿ, ಮೂಗು, ಹೊಟ್ಟೆಯ ಭಾಗಕ್ಕೆ ಗಂಭೀರವಾದ ಗಾಯಗಳಾಗಿವೆ.
ಜಮೀನು ವ್ಯಾಜ್ಯ ಕೇಸ್ ವಿಚಾರಣೆ ಮುಗಿಸಿ ಹೊರ ಬರುತ್ತಿದ್ದಂತೆಯೇ ವಕೀಲನ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಾಳು ವಲೀಕರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.