ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ: ಜಾನುವಾರು ಸಾಗಿಸುತ್ತಿದ್ದ ಲಾರಿ ಮೇಲೆ ದಾಳಿ: ಚಾಲಕ, ಕ್ಲೀನರ್ ಗೆ ಥಳಿತ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಸಮೀಪ ಹೆದ್ದಾರಿಯಲ್ಲಿ ಜಾನುವಾರು ಸಾಗಿಸುತ್ತಿದ್ದ ಲಾರಿ ಮೇಲೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಾಳಿ ಮಾಡಿದ್ದು, ನೈತಿಕ ಪೊಲೀಸ್ ಗಿರಿ ನಡೆಸಿ ಲಾರಿ ಚಾಲಕ ಮತ್ತು ಕ್ಲೀನರ್ ನನ್ನು ಥಳಿಸಿದ್ದಾರೆ.

ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ 50ಕ್ಕೂ ಹೆಚ್ಚು ಹಿಂದೂಪರ ಕಾರ್ಯಕರ್ತರು ಲಾರಿ ತಡೆದು ಚಾಲಕ, ಕ್ಲೀನರ್ ನನ್ನು ಥಳಿಸಿದ್ದಾರೆ. ಹುಬ್ಬಳ್ಳಿ ಕಡೆಗೆ ಲಾರಿಯಲ್ಲಿ ಜಾನುವಾರು ಸಾಗಿಸುತ್ತಿರುವ ಮಾಹಿತಿ ತಿಳಿದು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಲಾರಿ ತಡೆದಿದ್ದಾರೆ. ಚಾಲಕ, ಕ್ಲೀನರ್ ಜೊತೆಗೆ ಮಾತಿನ ಚಕಮಕಿ ನಡೆದಿದ್ದು, ಯುವಕರು ಇಬ್ಬರನ್ನೂ ಥಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ ಗೋವುಗಳನ್ನು ರಕ್ಷಿಸಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಲಾರಿಯನ್ನು ಶಿಫ್ಟ್ ಮಾಡಲಾಗಿದ್ದು, ಗಾಯಾಳು ಚಾಲಕ ಮತ್ತು ಕ್ಲೀನರ್ ನನ್ನು ಆಸ್ಪತ್ರೆಗೆ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read