BIG NEWS: ಮಳೆ ಅಬ್ಬರಕ್ಕೆ ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ಆಟೋ ಚಾಲಕ : ದುರಂತ ಸಾವು

ಬೆಳಗಾವಿ: ಬೆಳಗಾವಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿ, ಹಳ್ಳ-ಕೊಳ್ಳಗಳು ಪ್ರವಾಹದಂತೆ ಉಕ್ಕಿ ಹರಿಯುತ್ತಿವೆ. ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿದ್ದ ಆಟೋ ಚಾಲಕ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಯರಗಟ್ಟಿ ತಾಲೂಕಿನ ಚಿಕ್ಕಬೂದೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಹಳ್ಳದ ನೀರಿನಲ್ಲಿ ಆಟೋ ದಾಟಿಸಲು ಹೋಗಿ ಆಟೋ ಸಮೇತ ಚಾಲಕ ಕೊಚ್ಚಿ ಹೋಗಿದ್ದಾನೆ. ಘಟನಾ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ, ಗ್ರಾಮಸ್ಥರು ಬೀಡು ಬಿಟ್ಟಿದ್ದು, ಆತೋ ಚಾಲಕನಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read