ರುಂಡ ಕತ್ತರಿಸಿ ಯುವಕನ ಕೊಲೆ

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬಸ್ತವಾಡ ಗ್ರಾಮದ ಕಾಡಿನಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ.

ಹಾರೂಗೇರಿಯ ಅಕ್ಬರ್ ಶಬ್ಬೀರ್ ಜಮಾದಾರ(21) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಮಾರಕಾಸ್ತ್ರದಿಂದ ತಲೆ ಕತ್ತರಿಸಿ ಅಕ್ಬರ್ ನನ್ನು ಕೊಲೆ ಮಾಡಲಾಗಿದ್ದು, ಕಾಡಿನ ಬೇರೆ ಬೇರೆ ಸ್ಥಳಗಳಲ್ಲಿ ರುಂಡ ಮತ್ತು ಮುಂಡ ಪತ್ತೆಯಾಗಿವೆ.

ಗುರುವಾರವೇ ಘಟನೆ ನಡೆದಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ ಎಂದು ಶಂಕಿಸಲಾಗಿದೆ. ಕೊಲೆಗೆ ನಿಖರವಾದ ಕಾರಣ ಗೊತ್ತಾಗಿಲ್ಲ. ತನಿಖೆ ಕೈಗೊಂಡ ಪೊಲೀಸರು ಮಹಾಂತೇಶ ಎಂಬ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದ್ದು, ಹಾರೋಗೇರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read