BIG NEWS: ಬಸ್ ನಲ್ಲಿ ಕಿಟಕಿ ಸೀಟ್ ಗಾಗಿ ಜಗಳ: ವಿದ್ಯಾರ್ಥಿಗೆ ಚಾಕು ಇರಿದ ಯುವಕರು

ಬೆಳಗಾವಿ: ಸಿಬಿಟಿ ಬಸ್ ನಲ್ಲಿ ಕಿಟಕಿ ಬದಿ ಸೀಟಿಗಾಗಿ ಯುವಕರು ಹಾಗೂ ವಿದ್ಯಾರ್ಥಿ ನಡುವೆ ಗಲಾಟೆ ಆರಂಭವಾಗಿ ಯುವಕನೊಬ್ಬ ವಿದ್ಯಾರ್ಥಿಗೆ ಚಾಕು ಇರಿದ ಘಟನೆ ನಡೆದಿದೆ.

ಮಾಜ್ ರಸೀದ್ ಸನದಿ (19) ಚಾಕು ಇರಿತದಿಂದ ಗಾಯಗೊಂಡಿರುವ ವಿದ್ಯಾರ್ಥಿ. ಗಾಯಾಳು ವಿದ್ಯಾರ್ಥಿಯನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಪಂತಬಾಳೆಕುಂದ್ರಿ-ಸಿಬಿಇ ಬಸ್ ನಲ್ಲಿ ಬೆಳಗಾವಿ ನಗರಕ್ಕೆ ಬರುತ್ತಿದ್ದಾಗ ಕಿಟಕಿ ಸೀಟ್ ವಿಚಾರವಗಿ ಮಾಜ್ ಮತ್ತು ಕೆಲ ಯುವಕರ ನಡುವೆ ಜಗಳ ಶುರುವಾಗಿದೆ. ಗಲಾಟೆ ವಿಕೋಪಕ್ಕೆ ಹೋಗಿದ್ದು, ಯುವಕರ ಗುಂಪು ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪರಿಚಿಯ ಯುವಕರ ಪತ್ತೆಗೆ ಬಲೆ ಬೀಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read