BIG NEWS: ಯುವಕನನ್ನು ಕೊಂದು ಪೊಲೀಸ್ ಠಾಣೆಗೆ ಬಂದು ಶರಣಾದ ಆರೋಪಿ

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರ ನಡುವೆ ಗಲಾಟೆ ನಡೆದು, ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ಹೊರವಲಯದ ಸಾಗರ ಎಂಬಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ಯಾಸಿನ್ ಜಾತಗಾರ (22) ಎಂದು ಗುರುತಿಸಲಾಗಿದೆ. ರೋಹಿತ್ ಜಾಧವ್ ಕೊಲೆ ಮಾಡಿರುವ ಆರೋಪಿ. ಗಲಾಟೆಯಲ್ಲಿ ಯುವಕನನ್ನು ಚಕುವಿನಿಂದ ಇರಿದು ಕೊಂದ ರೋಹಿತ್ ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

ಘಟನಾ ಸ್ಥಳಕ್ಕೆ ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read