ಬಳ್ಳಾರಿ ನಗರ ಪಾಲಿಕೆ ಮೇಯರ್ ಚುನಾವಣೆ ಮತ್ತೆ ಮುಂದೂಡಿಕೆ

ಬಳ್ಳಾರಿ: ಬಳ್ಳಾರಿ ನಗರ ಪಾಲಿಕೆ ಮೇಯರ್ ಚುನಾವಣೆ ಮತ್ತೆ ಮುಂದೂಡಲಾಗಿದೆ. ನಾಳೆ ನಡೆಯಬೇಕಿದ್ದ ಮೇಯರ್ ಚುನಾವಣೆ ಮುಂದೂಡಲಾಗಿದೆ.

ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೆ ಅವರು ಚುನಾವಣೆ ಮುಂದೂಡಿದ್ದಾರೆ. ಬಳ್ಳಾರಿಯಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳ ದಾಳಿ, ಅಭ್ಯರ್ಥಿಗಳ ಗುಂಪುಗಾರಿಕೆ, ರಾಜಕೀಯ ವೈಷಮ್ಯ, ಗಲಾಟೆ ಸಾಧ್ಯತೆ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲಾಗಿದೆ.

ಬಳ್ಳಾರಿಯಲಿ ಬಿಗುವಿನ ವಾತಾವರಣದ ಬಗ್ಗೆ ಪೊಲೀಸ್ ಅಧೀಕ್ಷಕರು ವರದಿ ನೀಡಿದ್ದರು. ಶಾಂತಿ ಕಾರಣದಿಂದ ಮುಂದಿನ ಆದೇಶದವರೆಗೆ ಬಳ್ಳಾರಿ ಚುನಾವಣೆ ಮುಂದೂಡಲಾಗಿದೆ. ನವೆಂಬರ್ 28ರಂದು ಚುನಾವಣಾ ಅಧಿಕಾರಿ ಗೈರಾದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು. ಇದೀಗ ನಾಳೆ ನಡೆಯಬೇಕಿದ್ದ ಬಳ್ಳಾರಿ ಪಾಲಿಕೆ ಮೇಯರ್ ಚುನಾವಣೆಯನ್ನು ಮತ್ತೆ ಮುಂದೂಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read