BREAKING: ನಟ, ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ವಿರುದ್ಧ ಪಶ್ಚಿಮ ಬಂಗಾಳ ಪೊಲೀಸರು ಮಂಗಳವಾರ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.

ಸಾಲ್ಟ್ ಲೇಕ್ ನಿವಾಸಿ ಕೌಶಿಕ್ ಸಹಾ ಅವರು ಸಲ್ಲಿಸಿದ ದೂರಿನಲ್ಲಿ ಅಕ್ಟೋಬರ್ 27 ರಂದು ಭಾಷಣ ಮಾಡಿದ ಮಿಥುನ್ ಚಕ್ರವರ್ತಿ ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ. ಕೋಮು ದ್ವೇಷವನ್ನು ಉತ್ತೇಜಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ ಅಡಿ ಸೆಕ್ಷನ್ 192(ಗಲಭೆ ಉಂಟುಮಾಡಲು ಪ್ರಚೋದನೆ) ಮತ್ತು ಸೆಕ್ಷನ್ 196(ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಸೇರಿದಂತೆ ಬಿಎನ್‌ಎಸ್ ಬಹು ವಿಭಾಗಗಳ ಅಡಿಯಲ್ಲಿ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಕ್ಷದ ಸದಸ್ಯತ್ವ ಅಭಿಯಾನವನ್ನು ಪ್ರಾರಂಭಿಸಿದ ಬಿಜೆಪಿ ಸಮಾರಂಭದಲ್ಲಿ ಮಿಥುನ್ ಚಕ್ರವರ್ತಿ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಜೆಪಿಯ ಬಂಗಾಳ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ ಅವರು ಆರೋಪಗಳನ್ನು “ಆಧಾರರಹಿತ” ಎಂದು ತಳ್ಳಿಹಾಕಿದ್ದಾರೆ. ಪ್ರಕರಣವು ರಾಜಕೀಯ ಪ್ರೇರಿತವಾಗಿದೆ. ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದರೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭಿನಂದಿಸಲಿಲ್ಲ. ಈಗ ಪ್ರಕರಣ ದಾಖಲಿಸುವ ಮೂಲಕ ಅವರನ್ನು ಗೌರವಿಸುತ್ತಿದ್ದಾರೆ ಎಂದು ವ್ಯಂಗ್ಯವಾಗಿ ಟೀಕಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read