ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಹತ್ಯೆ ಪ್ರಕರಣ ನಡೆದಿದೆ. ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದು ಪರಾರಿಯಾಗಿರುವ ಘಟನೆ ಜೆ.ಜೆ.ನಗರದಲ್ಲಿ ನಡೆದಿದೆ.
ಜೆ.ಜೆ. ನಗರದ ಜನತಾ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ವಿಜಯ್ (26) ಕೊಲೆಯಾದ ಯುವಕ. ವಿಜಯ್ ನಿನ್ನೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿ ಹೊರಬಂದಿದ್ದ.
ಮಾತುಕತೆಗೆ ಎಂದು ಕರೆದಿದ್ದ ದುಷ್ಕರ್ಮಿಗಳು ವಿಜಯ್ ನನ್ನು ಹತ್ಯೆಗೈದು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜೆ.ಜೆ.ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.