BREAKING: ಬೆಂಗಳೂರಿನಲ್ಲಿ ಅಗ್ನಿ ಅವಘಡ; 8 ಮನೆಗಳು ಸುಟ್ಟು ಭಸ್ಮ

ಬೆಂಗಳೂರು: ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿಯೇ ರಾಜಧಾನಿ ಬೆಂಗಳೂರಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 8 ಮನೆಗಳು ಸುಟ್ಟು ಭಸ್ಮವಾಗಿವೆ.

ಚಾಮರಾಜಪೇಟೆಯ ಆನಂದಪುರ ಬಳಿ ಬೆಂಕಿ ಅವಘಡ ಸಂಭವಿಸಿದ್ದು, 8 ಶೀಟ್ ಮನೆಗಳು ಬೆಂಕಿಗಾಹುತಿಯಾಗಿವೆ. ಮೊದಲು ಗೋದಾಮಿಗೆ ತಗುಲಿದ ಬೆಂಕಿ ಬಳಿಕ ಸುತ್ತಮುತ್ತಲು ಇರುವ ಮನೆಗಳಿಗೆ ವ್ಯಾಪಿಸಿದೆ.

ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದು, ಸುತ್ತಮುತ್ತಲು ದಟ್ಟ ಹೊಗೆ ಆವರಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯಸಂಭವಿಸಿಲ್ಲ. ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read