ಬೆಂಗಳೂರು: ರಾಜ್ಯಾರಾಜಧಾನಿ ಬೆಂಗಳೂರಿನಲ್ಲಿ ಸುರುದ ಭಾರಿ ಮಳೆಯಿಂದ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಮನೆಗಳು, ರಸ್ತೆಗಳು, ಅಂಡರ್ ಪಾಸ್ ಗಳು, ಬಡಾವಣೆಗಳು ಜಲಾವೃತಗೊಂಡಿದ್ದು, ವರುಣಾರ್ಭಟ ಸಿಲಿಕಾನ್ ಸಿಟಿಯನ್ನು ಅಲ್ಲೋಲಕಲ್ಲೋಲಗೊಳಿಸಿದೆ.
ಧಾರಾಕಾರ ಮಳೆಯಿಂದಾಗಿ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ನಲ್ಲಿ ನೀರು ನಿಂತಿದೆ. ಪರಿಣಾಮ ವಾಹನ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ. ಫ್ಲೈ ಓವರ್ ನಲ್ಲಿ ನೀರು ನಿಂತಿರುವ ಹಿನ್ನೆಲೆಯಲ್ಲಿ ಸಂಚಾರ ಬಂದ್ ಮಾಡಲಾಗಿದೆ. ವಾಹನ ಸವಾರರಿಗೆ ಪರ್ಯಾಯ ಮಾರ್ಗದಲ್ಲಿ ತೆರಲಲು ಸೂಚಿಸಲಾಗಿದೆ.
ಮಳೆಯಿಂದಾಗಿ ಇಡೀ ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ಅವಾಂತರ ಸೃಷ್ಟಿಯಾಗಿದ್ದು, ಶಿವಾನಂದ ಸರ್ಕಲ್ ಅಂಡರ್ ಪಾಸ್ ಮುಳುಗಡೆಯಾಗಿದೆ. ಹಲವೆಡೆ ರಸ್ತೆಗಳ ಮೇಲೆ ಮರಗಳು ಮುರಿದು ಬಿದ್ದು ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಸಾಯಿ ಲೇಔಟ್, ಸಂಪಾಂಗಿರಾಮನಗರ, ಈಜಿಪುರ ಸೇರಿದಂತೆ ಬಹುತೇಕ ಪ್ರದೇಶ ನೀರಿನಲ್ಲಿ ಮುಳುಗಿದ್ದು, ಪ್ರವಾಹ ಸ್ಥಿತಿ ಎದುರಾಗಿದೆ.