Bengaluru : ಪೊಲೀಸ್ ಇಲಾಖೆಯಲ್ಲಿ ವಿಚಿತ್ರ ಘಟನೆ : ವರ್ಗಾವಣೆಗೆ ಮೊರೆಯಿಟ್ಟ ಒಂದೇ ಠಾಣೆಯ 35ಕ್ಕೂ ಹೆಚ್ಚು ಸಿಬ್ಬಂದಿಗಳು

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ವಿಚಿತ್ರ ಘಟನೆ ನಡೆದಿದ್ದು, ಒಂದೇ ಠಾಣೆಯ 35ಕ್ಕೂ ಹೆಚ್ಚು ಸಿಬ್ಬಂದಿಗಳು ವರ್ಗಾವಣೆಗೆ ಮೊರೆಯಿಟ್ಟಿದ್ದಾರೆ.

ಒಂದು ಕ್ಷಣ ಈ ವಿಚಾರ ಕೇಳಿದರೆ ಆಶ್ವರ್ಯವಾಗಬಹುದು. ಹೌದು, ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಒಂದೇ ಠಾಣೆಯ 35ಕ್ಕೂ ಹೆಚ್ಚು ಸಿಬ್ಬಂದಿ ವರ್ಗಾವಣೆಗೆ ಮೊರೆಯಿಟ್ಟಿದ್ದಾರೆ. ಅದಕ್ಕೆ ಕಾರಣ ಮೇಲಾಧಿಕಾರಿಯ ವರ್ತನೆ, ಕಿರುಕುಳವಂತೆ.

ಕಬ್ಬನ್ ಪಾರ್ಕ್ ಠಾಣೆಯ ಇನ್ಸ್ಪೆಕ್ಟರ್ ಗಿರೀಶ್ ಕಿರುಕುಳಕ್ಕೆ ಬೇಸತ್ತು 12 ಎಎಸ್ಐ, 24 ಕಾನ್ಸ್ಟೇಬಲ್ಗಳಿಂದ ವರ್ಗಾವಣೆಗೆ ಮೊರೆ ಹೋಗಿದ್ದಾರೆ ಎಂದು ಹೇಳಲಾಗಿದೆ. ಸದ್ಯ, ಈ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಗೃಹ ಸಚಿವರು, ಪೊಲೀಸ್ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read