BIG BREAKING: ಬೆಂಗಳೂರು ಏರ್ ಪೋರ್ಟ್ ನಲ್ಲೇ ಚಾಕುವಿನಿಂದ ಇರಿದು ಸಿಬ್ಬಂದಿ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಟ್ರಾಲಿ ಆಪರೇಟರ್ ಗೆ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ.

ರಾಮಕೃಷ್ಣಪ್ಪ ಕೊಲೆಯಾದವರು ಎಂದು ಹೇಳಲಾಗಿದೆ. ತುಮಕೂರು ಜಿಲ್ಲೆ ಮಧುಗಿರಿ ಮೂಲದ ರಮೇಶ್ ಪತ್ನಿ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಅನುಮಾನದ ಮೇಲೆ ಟ್ರಾಲಿ ಆಪರೇಟರ್ ರಾಮಕೃಷ್ಣಪ್ಪ ಅವರನ್ನು ಕೊಲೆ ಮಾಡಲಾಗಿದೆ.

ರಮೇಶ್ ಪತ್ನಿಗೆ ರಾಮಕೃಷ್ಣಪ್ಪ ಮೆಸೇಜ್ ಮಾಡುತ್ತಿದ್ದ. ಅವರ ನಡುವೆ ಅಕ್ರಮ ಸಂಬಂಧದ ಶಂಕೆಯಿಂದ ಚಾಕು ಸಮೇತ ಕೆಂಪೇಗೌಡ ಏರ್ಪೋರ್ಟ್ ಗೆ ಬಂದಿದ್ದ ರಮೇಶ್ ಮಾತನಾಡಬೇಕಿದೆ ಎಂದು ಟರ್ಮಿನಲ್ ಹೊರ ಆವರಣಕ್ಕೆ ರಾಮಕೃಷ್ಣಪ್ಪರನ್ನು ಕರೆದು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಮೇಶ್ ನನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read