ಬೆಂಗಳೂರು ಬಂದ್ : ಪೊಲೀಸರಿಗೆ ತಂದಿದ್ದ ತಿಂಡಿ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆ

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ರೈತ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ಬೆಂಗಳೂರಿನಲ್ಲಿ ಕಾವೇರಿ ಹೋರಾಟದ ಕಿಚ್ಚು ತೀವ್ರಗೊಂಡಿದೆ.

ಇನ್ನೂ, ಬೆಂಗಳೂರು ಬಂದ್ ಭದ್ರತೆಯಲ್ಲಿದ್ದ ಯಶವಂತಪುರ ಟ್ರಾಫಿಕ್ ಪೊಲೀಸರಿಗೆ ತಂದಿದ್ದ ಊಟದಲ್ಲಿ ಇಲಿ ಪತ್ತೆಯಾಗಿದೆ.. ಊಟದಲ್ಲಿ ಇಲಿ ಕಂಡು ಪೊಲೀಸರು ಶಾಕ್ ಆಗಿದ್ದಾರೆ.

ಭದ್ರತೆಗೆ ನಿಯೋಜಿಸಲಾಗಿದ್ದ ಯಶವಂತಪುರ ಟ್ರಾಫಿಕ್ ಪೊಲೀಸರಿಗೆ ತಂದಿದ್ದ ರೈಸ್ ಬಾತ್ನಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಪೊಲೀಸ್ ಇಲಾಖೆಯಿಂದ ಸರಬರಾಜು ಮಾಡಿದ ಊಟದ ಪ್ಯಾಕೆಟ್ ತೆರೆದಾಗ ಅದರಲ್ಲಿ ಇಲಿ ಕಂಡುಬಂದಿದೆ. ಅದನ್ನು ನೋಡಿ ಪೊಲೀಸ್ ಶಾಕ್ ಆಗಿದ್ದಾರೆ. ಊಟ ಸರಬರಾಜು ಮಾಡಿದ ಹೋಟೆಲ್ ಯಾವುದು ಎಂಬುದು ತಿಳಿದುಬಂದಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸರಿಗೆ ಇಂದೆಂತಹ ಸ್ಥಿತಿ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read