BIG NEWS : ಚಿಕ್ಕಮಗಳೂರಲ್ಲಿ ಬೆಂಗಳೂರು ಮೂಲದ ಕ್ಯಾಬ್ ಚಾಲಕನ ಬರ್ಬರ ಹತ್ಯೆ..!

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹುಲಿಗೊಂದಿ ಗ್ರಾಮದಲ್ಲಿ ಬೆಂಗಳೂರು ಮೂಲದ ಕ್ಯಾಬ್ ಚಾಲಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಮೃತನನ್ನು ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ದರ್ಶನ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ನಡೆದ ಪಾರ್ಟಿಯೊಂದರಲ್ಲಿ ಸ್ನೇಹಿತನ ತಾಯಿಗೆ ಅವಮಾನ ಮಾಡಿದ್ದಕ್ಕೆ ದರ್ಶನ್ ಅವರನ್ನು ನಾಲ್ವರು ಸ್ನೇಹಿತರು ಕೊಲೆ ಮಾಡಿದ್ದಾರೆ.

ಈ ಹಿಂದೆ ಬೆಂಗಳೂರಿನ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಹಾಫ್ ಮರ್ಡರ್ ಪ್ರಕರಣದಲ್ಲಿ ದರ್ಶನ್ ಮತ್ತು ಆತನ ಸ್ನೇಹಿತರನ್ನು ಬಂಧಿಸಲಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ದರ್ಶನ್ ಮತ್ತು ಅವರ ಸ್ನೇಹಿತರು ಬೆಂಗಳೂರಿನಲ್ಲಿ ಪಾರ್ಟಿ ಮಾಡಿದರು. ಪಾರ್ಟಿಯಲ್ಲಿ ದರ್ಶನ್ ತಮ್ಮ ಸ್ನೇಹಿತನ ತಾಯಿಗೆ ಅವಮಾನ ಮಾಡಿದ್ದಾರೆ ಎನ್ನಲಾಗಿದೆ.

ಒಂದು ವಾರದ ಹಿಂದೆ ಬೆಂಗಳೂರಿಗೆ ಬಂದಿದ್ದ ಆತನ ಸ್ನೇಹಿತರು ಫೆ.15ರಂದು ಇನ್ನೂ ಇಬ್ಬರು ಸ್ನೇಹಿತರೊಂದಿಗೆ ಹುಲಿಗೊಂದಿಗೆ ಬಂದು ದರ್ಶನ್ ನನ್ನು ಹರಿತವಾದ ಆಯುಧಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಕೊಲೆಯಾದ ದಿನ ದರ್ಶನ್ ತನ್ನ ಅಜ್ಜನಿಗೆ ಸ್ನೇಹಿತರೊಂದಿಗೆ ಹೊರಗೆ ಹೋಗುತ್ತಿದ್ದೇನೆ ಎಂದು ಹೇಳಿ ಅಜ್ಜನ ಮನೆಯಿಂದ ಹೊರಟಿದ್ದ. ಕಡೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ದರ್ಶನ್ ಸ್ನೇಹಿತರಾದ ಮನೋಜ್, ಕೌಶಿಕ್, ಕಿರಣ್ ಮತ್ತು ರಾಜು ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read