ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿ ಹತ್ಯೆ

ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಜಯನಗರದ 7ನೇ ಬಡಾವಣೆಯಲ್ಲಿ ನಡೆದಿದೆ.

ರಾತ್ರಿ ವೇಳೆ ರಸ್ತೆ ಬದಿ ಕುಡಿದು ಮಲಗಿದ್ದ ಓರ್ವ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಆತನ ಮೇಲೆ ಮತ್ತೊಬ್ಬ ಬಂದು ಬಿದ್ದಿದ್ದರಿಂದ ಇಬ್ಬರ ನಡುವೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ವ್ಯಕ್ತಿ ಮತ್ತು ಆರೋಪಿಯ ಗುರುತು ಪತ್ತೆಯಾಗಿಲ್ಲ. ಬನಶಂಕರಿ ಠಾಣೆ ಪೊಲೀಸರು ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read