BREAKING NEWS: ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ: ಕಟ್ಟಡ ಮಾಲೀಕ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು, 6 ಕಾರ್ಮಿಕರು ಮೃತಪಟ್ಟಿದ್ದಾರೆ. ಈವರೆಗೆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 13 ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಈನಡುವೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕ ಭ್ಉವನ್ ರೆಡ್ಡಿ ಹಾಗೂ ಗುತ್ತಿಗೆದಾರರ ಮುನಿಯಪ್ಪ ಎಂಬುವವರನ್ನು ಬಂಧಿಸಲಾಗಿದೆ.

ಕಟ್ಟಡ ಮಾಲೀಕ ಭುವನ್ ರೆಡ್ಡಿ 4 ಅಂತಸ್ತಗಳನ್ನು ಕಟ್ಟಲು ಮಾತ್ರ ಅನುಮತಿ ಪಡೆದಿದ್ದರು. ಆದರೆ 6 ಅಂತಸ್ತಗಳನ್ನು ನಿರ್ಮಾಣ ಮಾಡಲಾಗಿತ್ತು. ಅವೈಜ್ಞಾನಿಕ ಕಟ್ಟಡ ನಿರ್ಮಾಣದಿಂದಾಗಿ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read