ದೀಪಾವಳಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ವಿಶೇಷ ರೈಲು

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ನೈರುತ್ಯ ರೈಲ್ವೆ ಎರಡು ಟ್ರಿಪ್ ವಿಶೇಷ ರೈಲುಗಳ ಸೇವೆ ಕಲ್ಪಿಸಿದೆ.

ಬೆಂಗಳೂರು -ಕಲಬುರಗಿ ವಿಶೇಷ ಎಕ್ಸ್ಪ್ರೆಸ್ ರೈಲು(06533) ಅಕ್ಟೋಬರ್ 30ರಂದು ಮತ್ತು ನವೆಂಬರ್ 2ರಂದು ರಾತ್ರಿ 9:15ಕ್ಕೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡಲಿದೆ. ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆಧೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ ಯಾದಗಿರಿ, ಶಹಾಬಾದ್ ನಿಲ್ದಾಣಗಳ ಮೂಲಕ ಹಾದು ಮರುದಿನ ಬೆಳಗ್ಗೆ 7:40ಕ್ಕೆ ಕಲಬುರಗಿ ತಲುಪಲಿದೆ.

ಹಿಂದಿರುಗುವ ರೈಲು(06534) ಕಲಬುರಗಿಯಿಂದ ಅಕ್ಟೋಬರ್ 31 ಮತ್ತು ನವೆಂಬರ್ 3ರಂದು ಬೆಳಗ್ಗೆ 9:30 ಕ್ಕೆ ಹೊರಡಲಿದ್ದು, ಅದೇ ದಿನ ರಾತ್ರಿ 8 ಗಂಟೆಗೆ ಎಸ್.ಎಂ.ವಿ.ಟಿ. ಬೆಂಗಳೂರು ತಲುಪಲಿದೆ. 12 ಜನರಲ್ ಸೆಕೆಂಡ್ ಕ್ಲಾಸ್, 3 ಸ್ಲೀಪರ್ ಕ್ಲಾಸ್, 2 ಎಸಿ ತ್ರೀ ಟೈಯರ್, ಒಂದು ಲಗೇಜ್/ ಬ್ರೇಕ್ ವ್ಯಾನ್ ಕಂ ಜನರೇಟರ್ ಕಾರ್ ಮತ್ತು 1 SLRD ಸೇರಿ 19 ಬೋಗಿಗಳು ಇರಲಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read