BIG NEWS: ಐತಿಹಾಸಿಕ ಕಂಬಳ ಕ್ರೀಡೆಗೆ ಸರ್ಕಾರದಿಂದ 1 ಕೋಟಿ ಸಹಾಯಧನ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ದೇಸಿ ಹಾಗೂ ಐತಿಹಾಸಿಕ ಕಂಬಳ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ಅರಮನೆ ಮೈದಾನದಲ್ಲಿ ಬೆಂಗಳೂರು ಕಂಬಳ- ನಮ್ಮ ಕಂಬಳ ಕರ ಪೂಜೆ ನೆರವೇರಿಸಿ ಮಾತನಾಡಿದ ಡಿಸಿಎಂ, ಈ ಹಿಂದಿನಂತೆ 20 ಕಂಬಳಗಳಿಗೆ ತಲಾ 5 ಲಕ್ಷದಂತೆ 1 ಕೋಟಿ ಸಹಾಯಧನವನ್ನು ನೀಡಲಾಗುವುದು ಎಂದು ಹೇಳಿದರು.

ಕಂಬಳಕ್ಕೆ ಸಹಾಯಧನ ಬಿಡುಗಡೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಜತೆ ಚರ್ಚೆ ನಡೆಸಲಾಗುವುದು. ಕರ್ನಾಟಕದ ಕರಾವಳಿ ಭಾಗ ಈ ದೇಶದ ದೊಡ್ಡ ಆಸ್ತಿ. ದಕ್ಷಿಣ ಕನ್ನಡ ಶ್ರೀಮಂತ ಜನಪದ ಆಚರಣೆಗಳನ್ನು ಹೊಂದಿದೆ. ದಕ್ಷಿಣ ಕನ್ನಡದ ಆಚರಣೆ ಬೆಂಗಳೂರಿನಲ್ಲೂ ನಡೆಯಬೇಕು. ಅಲ್ಲಿನ ಐತಿಹಾಸಿಕ ಕಂಬಳ ಕ್ರೀಡೆ ಬೆಂಗಳೂರಿಗರಿಗೂ ಪರಿಚಯಿಸುತ್ತಿರುವುದು ಶ್ಲಾಘನೀಯ. ಕಂಬಳಕ್ಕೆ ಸರ್ಕಾರ ಪ್ರೋತ್ಸಾಹ ನೀಡುತ್ತದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read