BIG NEWS: ರಾಜ್ಯದಲ್ಲಿ ಮತ್ತೆ ಹೆಚ್ಚಲಿದೆ ಮಳೆ ಅಬ್ಬರ: ನ.9ರ ಬಳಿಕ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ವರುಣಾರ್ಭಟ ಮತ್ತೆ ಹೆಚ್ಚಾಗಲಿದೆ. ನವೆಂಬರ್ 9ರ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ರಾಯಚೂರು, ಧಾರವಾಡ, ಹಾವೇರಿ, ಯಾದಗಿರಿ, ಬೆಂಗಳೂರು ಗ್ರಾಮಂತರ, ಬೆಂಗಳೂರು ನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಚಾಮರಾಜನಗರ, ದಾವಣಗೆರೆ, ಹಾಸನ, ತುಮಕೂರು ವಿಜಯನಗರ, ಮಂಡ್ಯ, ಮೈಸೂರು, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮುಂದಿನ ಎರಡು ದಿನಗಳ ಕಾಲ ರಜ್ಯದ 15 ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇಇಂದು ಬೆಂಗಲೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read