Rain Alert : ಬೆಂಗಳೂರಿಗರೇ ಎಚ್ಚರ : ಇಂದು ಸಂಜೆ ಭಾರಿ ‘ಮಳೆ’ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಜನ ಸಂಚಾರ ಅಸ್ತವ್ಯಸ್ತವಾಗಿದೆ.

ಅದೇ ರೀತಿ ಇಂದು ಸಂಜೆ ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಮಧ್ಯಾಹ್ನದಿಂದ ಸಂಜೆವರೆಗೂ ಬೆಂಗಳೂರಲ್ಲಿ ವರುಣ ಅಬ್ಬರಿಸಿದ್ದು, ರಸ್ತೆಗಳು ಜಲಾವೃತವಾಗಿದೆ. ಇಂದು ಸಂಜೆ ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಲಾಸಿಪಾಳ್ಯ, ಕೆ.ಆರ್.ಮಾರ್ಕೆಟ್, ಜಯನಗರ, ವಿಲ್ಸನ್ಗಾರ್ಡನ್, ಕಾರ್ಪೊರೇಷನ್ ವೃತ್ತ, ಡಬಲ್ ರೋಡ್, ಮೆಜೆಸ್ಟಿಕ್, ಶಾಂತಿನಗರ, ಎಂ.ಜಿ.ರಸ್ತೆ, ವಿವೇಕನಗರ ಮತ್ತು ಕೋರಮಂಗಲ ಸೇರಿದಂತೆ ಬೆಂಗಳೂರು ಮಹಾನಗರದ ಹಲವೆಡೆ ನಿನ್ನೆ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನದ ನಂತರ ಮಳೆಯಾಗಿದ್ದು, ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದ್ದಾರೆ. ಇನ್ನೂ , ಬೆಂಗಳೂರು. ತುಮಕೂರು, ಕೊಡಗು ಜಿಲ್ಲೆಗಳಲ್ಲಿ ಕೂಡ ನಿನ್ನೆ ವರುಣ ಅಬ್ಬರಿಸಿದ್ದಾನೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read