ಬೆಂಗಳೂರು : ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕಮಲ್ ಹಾಸನ್ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.ರಾಜ್ಯದಲ್ಲಿ ಥಗ್ ಲೈಫ್ ಸಿನಿಮಾ ರಿಲೀಸ್ ಮಾಡಿದ್ರೆ ಬೆಂಗಳೂರು ಬಂದ್ ಮಾಡಲಿದ್ದೇವೆ ಎಂದು ಕರವೇ ಪ್ರವೀಣ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
ಜೂನ್ 5 ರಂದು ಎಲ್ಲಿ ಕೂಡ ಸಿನಿಮಾ ರಿಲೀಸ್ ಆಗಬಾರದು, ಒಂದು ವೇಳೆ ಸಿನಿಮಾ ರಿಲೀಸ್ ಆದರೆ ಕರ್ನಾಟದಲ್ಲಿ ಹೋರಾಟದ ಕಿಚ್ಚು ಹೆಚ್ಚಾಗಲಿದೆ.ಥಿಯೇಟರ್ ಪುಡಿ ಪುಡಿ ಮಾಡಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಮಾತು ಸಹಿಸಲ್ಲ, ನಟ ಕ್ಷಮೆ ಕೇಳಬೇಕು. ಕನ್ನಡಿಗರ ಅಭಿಪ್ರಾಯ ಸಂಗ್ರಹಿಸಿ ಹೋರಾಟದ ಬಗ್ಗೆ ನಿರ್ಧರಿಸುತ್ತೇವೆ ಎಂದು ಪ್ರವೀಣ್ ಶೆಟ್ಟಿ ಹೇಳಿದರು.
ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕಮಲ್ ಹಾಸನ್ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯದಲ್ಲಿ ಕಮಲ್ ಹಾಸನ್ ಸಿನಿಮಾ ರಿಲೀಸ್ ಗೆ ಅವಕಾಶ ನೀಡಲ್ಲ ಎಂದು ಫಿಲ್ಮ್ ಚೇಂಬರ್ ಎಚ್ಚರಿಕೆ ನೀಡಿದೆ.
You Might Also Like
TAGGED:'ಥಗ್ ಲೈಫ್' ಸಿನಿಮಾ