ಶಿಕ್ಷಕರಿಗೆ ಕಿರುಕುಳ, ಹಣ ವಸೂಲಿ: ಬಿಇಒ ಅಮಾನತು

ಬೀದರ್: ಶಿಕ್ಷಕರಿಗೆ ಕಿರುಕುಳ ನೀಡಿ ಅವರಿಂದ ಹಣ ವಸೂಲಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್. ದೊಡ್ಡೆ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅಮಾನತು ಮಾಡಿದ್ದಾರೆ.

ಟಿ.ಆರ್. ದೊಡ್ಡ ಅವರ ಸ್ಥಾನಕ್ಕೆ ಕಲಬುರಗಿ ಜಿಲ್ಲೆ ಕಮಲಾಪುರದ ಡಯಟ್ ಹಿರಿಯ ಉಪನ್ಯಾಸಕರನ್ನು ವರ್ಗಾವಣೆ ಮಾಡಿ ನೇಮಕ ಮಾಡಲಾಗಿದೆ.

ಪರಿಷ್ಕೃತ ವೇತನ ಬಟವಾಡೆಗೆ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಂದ ಹಣ ಪಡೆದುಕೊಂಡು ಪರಿಷ್ಕೃತ ವೇತನ ಬಿಡುಗಡೆ ಗೊಳಿಸಿದ ಆರೋಪ ಟಿ.ಆರ್. ದೊಡ್ಡೆ ಮೇಲಿದೆ. ಕಾಲಮಿತಿ ವೇತನ ಬಡ್ತಿ ಮತ್ತು ವಾರ್ಷಿಕ ವೇತನ ಬಡ್ತಿ ಮಂಜೂರಿಗೆ ಶಿಕ್ಷಕರಿಂದ ಹಣ ಪಡೆದುಕೊಂಡಿದ್ದಾರೆ. ದೈಹಿಕ ಸದೃಢ ಪ್ರಮಾಣ ಪತ್ರ ಇಲ್ಲದೆ ರಜೆ ಮತ್ತು ವೇತನ ಬಿಡುಗಡೆ ಮಾಡಿರುವುದು, ಶಿಕ್ಷಕರು ಸಮಸ್ಯೆ ಹೇಳಿಕೊಂಡು ಹೋದಾಗ ಅವಾಚ್ಯ ಪದಗಳಿಂದ ನಿಂದಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಅವರನ್ನು ಅಮಾನತು ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read