ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.

ಭಗವಂತ ಖೂಬಾ ಅವರು ತಮ್ಮ ಶರ್ಟ್ ಮೇಲೆ ಬಿಜೆಪಿ ಚಿಹ್ನೆ ಇರುವ ಬ್ಯಾಡ್ ಧರಿಸಿ ಮತದಾನ ಮಾಡಿದ ಹಿನ್ನೆಲೆಯಲ್ಲಿ ಔರಾದ್ ಠಾಣೆಯಲ್ಲಿ ಚುನಾವಣಾಧಿಕಾರಿ ಪ್ರಕರಣ ದಾಖಲಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ ಔರಾದ್ ನಾಲಂದಾ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ 84ರಲ್ಲಿ ಭಗವಂತ ಖೂಬಾ ಕುಟುಂಬ ಸಮೇತ ಮತದಾನ ಮಾಡಲು ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರ ಶರ್ಟ್ ಮೇಲೆ ಬಿಜೆಪಿಯ ಚಿಹ್ನೆ ಇರುವ ಬ್ಯಾಡ್ಜ್ ಧರಿಸಿದ್ದರು.0 ಮತದಾನ ಕೇಂದ್ರದ 100 ಮೀಟರ್ ಒಳಗೆ ಪಕ್ಷದ ಬ್ಯಾಡ್ಜ್ ಧರಿಸಿ ಪತ್ರಕರ್ತರೊಂದಿಗೆ ಮಾತನಾಡಿದ್ದು ಪ್ರಜಾಪ್ರತಿನಿಧಿ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಅಧಿಕಾರಿ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಖೂಬಾ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read