BIG NEWS: ರೆಸಾರ್ಟ್ ನ ಈಜುಕೊಳಕ್ಕೆ ಬಿದ್ದು 5 ವರ್ಷದ ಬಾಲಕ ಸಾವು

ಭಟ್ಕಳ: ರೆಸಾರ್ಟ್ ನ ಈಜುಕೊಳಕ್ಕೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ.

ಜಾಲಿ ಬೀಚ್ ಬಳಿಯ ರೆಸಾರ್ಟ್ ನಲ್ಲಿ ಈ ದುರಂತ ಸಂಭವಿಸಿದೆ. ಮೊಹಮ್ಮದ್ ಮುಸ್ತಕಿಂ ಮೃತ ಬಾಲಕ. ಸ್ಥಳೀಯ ಮದ್ರಸಾ ಶಿಕ್ಷಕ ಮೌಲನಿ ಶಾಹಿದುಲ್ಲಾ ಅವರ ಪುತ್ರ ಎಂದು ಗುರುತಿಸಲಾಗಿದೆ.

ತಾಯಿ ಹಾಗೂ ತಮ್ಮನ ಜೊತೆ ಬಾಲಕ ರೆಸಾರ್ಟ್ ಗೆ ಹೋಗಿದ್ದ. ಈ ವೇಳೆ ಆಟವಾಡುತ್ತಿದ್ದ ಬಾಲಕ ಈಜುಕೊಳಕ್ಕೆ ಬಿದ್ದಿದ್ದಾನೆ. ತಕ್ಷಣ ತಾಯಿ ಮಗನನ್ನು ನೀರಿನಿಂದ ಮೇಲಕೆತ್ತಿದ್ದಾರೆ. ಆದರೂ ಬಾಲಕನ ಪ್ರಾಣ ಉಳಿಸಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ. ಭಟ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read