BREAKING : ಭೀಮಾ ನದಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿಯೂ ಸಾವು

ವಿಜಯಪುರ: ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ವೇಳೆ ದುರಂತ ಸಂಭವಿಸಿದ್ದು, ನದಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿಯೂ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲೆಯ ಇಂಡಿ ತಾಲೂಕಿನ ಖೇಡಗಿ ಗ್ರಾಮದಲ್ಲಿ ನಡೆದಿದೆ.

ಗೀತಾ ಹೊನ್ನರ (38) ಶೋಭಿತಾ (11), ವಾಸುದೇವ (10) ಮೃತರು. ಬೀಮಾ ನದಿಯ ಗುಂಡಿಯಲ್ಲಿ ತಾಯಿ ಗೀತಾ ಬಟ್ಟೆ ತೊಳೆಯುತ್ತಿದ್ದರು. ಈ ವೇಳೆ ಮಕ್ಕಳಾದ ಶೋಭಿತಾ ಹಾಗೂ ವಾಸುದೇವ ನೀರಿನ ಗುಂಡಿಗೆ ಬಿದ್ದಿದ್ದಾರೆ. ಮಕ್ಕಳಿಬ್ಬರನ್ನು ರಕ್ಷಿಸಲು ಹೋಗಿ ಸಾಧ್ಯವಾಗದೇ ಗೀತಾ ಕೂಡ ನೀರಿನಲ್ಲಿ ಮುಳುಗಿದ್ದಾರೆ.

ತಾಯಿ ಹಾಗೂ ಇಬ್ಬರು ಮಕ್ಕಳು ಬೀಮಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read