BIG NEWS: ಭೋವಿ ನಿಗಮ ಹಗರಣ: ತನಿಖಾಧಿಕಾರಿ ಸಸ್ಪೆಂಡ್

ಬೆಂಗಳೂರು: ಭೋವಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದಲೇ ಹಣ ಪಡೆದ ಆರೋಪದಲ್ಲಿ ತನಿಖಾಧಿಕಾರಿಯನ್ನು ಸಸ್ಪೆಂಡ್ ಮಾಡಿರುವ ಘಟನೆ ನಡೆದಿದೆ.

ಎ.ಡಿ.ನಾಗರಾಜ್ ಅಮಾನತುಗೊಂಡಿರುವ ತನಿಖಾಧಿಕಾರಿ. ಭೋವಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿತ್ತು. ಆದರೆ ತನಿಖಾಧಿಕಾರಿಯಾಗಿದ್ದ ಎ.ಡಿ.ನಾಗರಾಜ್ ಆರೋಪಿಗಳಿಂದಲೇ ಅವರು ಹಣ ಪಡೆದಿರುವ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಎ.ಡಿ.ನಾಗರಾಜ್, ಲೀಲಾವತಿ ಸೇರಿ ಹಲವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು ಇದೀಗ ಆರೋಪಿಗಳಿಂದ ಹಣ ಪಡೆದು, ಭ್ರಷ್ಟಾಚಾರ ನಡೆಸಿದ ಹಿನ್ನೆಲೆಯಲ್ಲಿ ಎ.ಡಿ.ನಾಗರಾಜ್ ಅವರನ್ನು ಅಮಾನತುಗೊಳಿಸಿ ಸಿಐಡಿ ಡಿಜಿ ಸಲೀಂ ಆದೇಶ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read