BIG NEWS: ಅಮಿತ್ ಶಾ ರಾಜ್ಯ ಪ್ರವಾಸದಲ್ಲಿ ದಿಢೀರ್ ಬದಲಾವಣೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಳೆ ಬೆಂಗಳೂರಿಗೆ ಆಗಮಿಸುವವರಿದ್ದರು. ಆದರೆ ಅವರ ರಾಜ್ಯ ಪ್ರವಾಸದಲ್ಲಿ ದಿಢೀರ್ ಬದಲಾವಣೆಯಾಗಿದೆ.

ನಾಳೆರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದ ಅಮಿತ್ ಶಾ ಅವರ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದ್ದು, ಬೆಂಗಳೂರು ಬದಲಾಗಿ ಬೀದರ್ ಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಬದಲಾಗಿ ನೇರವಾಗಿ ಬೀದರ್ ಗೆ ತೆರಳಲಿದ್ದು, ರಾತ್ರಿ 10 ಗಂಟೆಗೆ ಅಮಿತ್ ಶಾ ಬೀದರ್ ಏರ್ ಪೋರ್ಟ್ ಗೆ ಬಂದಿಳಿಯಲಿದ್ದಾರೆ. ಬೀದರ್ ಏರ್ ಪೋರ್ಟ್ ಗೆಸ್ಟ್ ಹೌಸ್ ನಲ್ಲಿ ತಂಗಲಿರುವ ಅಮಿತ್ ಶಾ, ಬಳಿಕ ಬೀದರ್ ಸಮಾವೇಶ ಮುಗಿಸಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read