BIG NEWS: ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ….? ಸಿಎಂ ಯಾಕೆ ರಾಜೀನಾಮೆ ಕೊಡಬೇಕು…..? ಸಚಿವ ಮಾಧುಸ್ವಾಮಿ ಸಮರ್ಥನೆ

ಬೆಂಗಳೂರು: ಶಾಸಕರ ಮಗ ಲಂಚ ಪಡೆದರೆ ಶಾಸಕರು, ಸಿಎಂ ಯಾಕೆ ರಾಜಿನಾಮೆ ಕೊಡಬೇಕು? ಇದಕ್ಕೂ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೂ ಸಂಬಂಧವಿಲ್ಲ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶಾಸಕ ಮಾಡಳ್ ವಿರೂಪಾಕ್ಷಪ್ಪ ಮಗ ಸರ್ಕಾರಿ ಅಧಿಕಾರಿಯಾಗಿದ್ದವರು. ಅವರು ದುಡ್ದು ತೆಗೆದುಕೊಂಡಿದ್ದಾರೆ. ಅದರ ಮುಂದಿನ ಪರಿಣಾಮ ಅವರು ಎದುರಿಸಬೇಕಾಗುತ್ತದೆ. ಇದರಲ್ಲಿ ಶಾಸಕರು ಹಾಗೂ ಸಿಎಂ ರಾಜೀನಾಮೆ ಪ್ರಶ್ನೆ ಬರುವುದಿಲ್ಲ ಎಂದರು.

ವಿರುಪಾಕ್ಷಪ್ಪ ಮಗ ಎಸಿಬಿಯಲ್ಲಿ ಒಬ್ಬ ಆಫೀಸರ್. ಆತ ಲಂಚ ತೆಗೆದುಕೊಂಡರೆ ವಿರೂಪಾಕ್ಷಪ್ಪ ಏನು ಮಾಡುತ್ತಾರೆ ? ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಯಾಕೆ ಬರೆ ಹಾಕಬೇಕು ? ಎಂದು ಸಮರ್ಥಿಸಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read